ಡಿಜಿಟಲ್ ಕನ್ನಡ ಟೀಮ್:
ಈ ಬಾರಿಯ 68ನೇ ಗಣರಾಜ್ಯೋತ್ಸವವನ್ನು ದೇಶದಾದ್ಯಂತ ಅದ್ಧೂರಿಯಾಗಿ ಆಚರಿಸಲಾಗಿದೆ. ಬೆಂಗಳೂರಿನ ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ವಜುಭಾಯ್ ವಾಲಾ ಧ್ವಜಾರೋಹಣ ಮಾಡಿದರು. ಈ ವೇಳೆ ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು, ಎನ್ ಸಿಸಿ ಮತ್ತು ಸ್ಕೌಟ್ಸ್ ಅಂಡ್ ಗೈಡ್ಸ್ ವಿದ್ಯಾರ್ಥಿಗಳ ಪಥಸಂಚಲನ ಗಮನ ಸೆಳೆದಿತ್ತು. ಈ ಬಾರಿಯ ಗಣರಾಜ್ಯೋತ್ಸವ ಕಾರ್ಯಕ್ರಮದ ಪ್ರಮುಖ ಹೈಲೈಟ್ಸ್ ಗಳು ಚಿತ್ರಗಳ ರೂಪದಲ್ಲಿ ನಿಮ್ಮ ಮುಂದಿದೆ…